07/05/2026
ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಜೀವನದ 50 ವರ್ಷಗಳ ಪೂರೈಕೆ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ನಡೆಯಲಿರುವ ಬಿಎಸ್ವೈ ಅಭಿಮಾನೋತ್ಸವಕ್ಕೆ ಚಿಕ್ಕಮಗಳೂರು ಜಿಲ್ಲೆಯಿಂದ 25,000ಕ್ಕೂ ಅಧಿಕ ಜನ ಭಾಗವಹಿಸಲಿದ್ದಾರೆ ಎಂದು ಕಡೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಚಿಕ್ಕಮಗಳೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಇದೇ ತಿಂಗಳ 9 ರಂದು ನಡೆಯುವ ಈ ಕಾರ್ಯಕ್ರಮಕ್ಕೆ ಜಿಲ್ಲೆಯಾದ್ಯಂತ ಬಿಎಸ್ವೈ ಅಭಿಮಾನಿಗಳಲ್ಲಿ ಭಾರಿ ಉತ್ಸಾಹ ಮನೆ ಮಾಡಿದೆ. ಈ ಬೃಹತ್ ಕಾರ್ಯಕ್ರಮ ಯಶಸ್ವಿಗೊಳಿಸಲು ಸಕಲ ಸಿದ್ಧತೆಗಳು ನಡೆದಿವೆ.
#ಚಿಕ್ಕಮಗಳೂರು #ಕರ್ನಾಟಕಸುದ್ದಿ #ಅಭಿಮಾನೋತ್ಸವ